37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya
error: Content is protected !!