25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!