August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya
error: Content is protected !!