23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

ಅಳದಂಗಡಿ: ಸರ್ಕಾರಿ ಪ್ರೌಢಶಾಲೆ ಅಳದಂಗಡಿ ಶಾಲೆಯಲ್ಲಿ ಅ.30 ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆಯು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಸುರೇಂದ್ರ ಜೈನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಲಿಲ್ಲಿ ಮ್ಯಾಥ್ಯು ರವರು ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಎಲ್ಲಾ ಶಿಕ್ಷಕರೂ ವಿದ್ಯಾಭ್ಯಾಸ ಪ್ರಗತಿ ಬಗ್ಗೆ ಸಲಹೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ವಿಶ್ಲೇಷಣೆ ತರಗತಿ ಶಿಕ್ಷಕರಿಂದ ಮಾಡಲಾಯಿತು.


ವಿದ್ಯಾರ್ಥಿ ಹಾಗೂ ಪೋಷಕರಿಗೆ ಮನೋಸ್ಥೈರ್ಯ ಮತ್ತು ಮಾದಕ ದ್ರವ್ಯ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಶ್ರೀಮತಿ ಶಾಂತಿ ಮರಿಯಾ ಸಲ್ದಾನ ಕಾರ್ಯಕ್ರಮವನ್ನು ಉದ್ದೇಶಿಸಿ ಹಿತನುಡಿಯನ್ನಾಡಿದರು.

ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಸಮಾಜ ವಿಜ್ಞಾನ ಶಿಕ್ಷಕ ಚಂದ್ರಶೇಖರ್ ರಾವ್ ಕಾರ್ಯಕ್ರಮವನ್ನು ನಿರೂಪಿಸಿ, ಗಣಿತ ಶಿಕ್ಷಕರಾದ ಉಮೇಶ್ ಗೌಡ ವಂದಿಸಿದರು.

Related posts

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya
error: Content is protected !!