September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಇಂದು(ಅ.31) ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ರಾಜ್ಯ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಪ್ರಮುಖರಾದ ಉಮೇಶ್ ಕುಲಾಲ್, ಜಯಪ್ರಕಾಶ್ ಕಡಮ್ಮಾಜೆ, ಪ್ರಮೋದ್ ಗೌಡ ಡಿಡುಪೆ, ವಿದ್ಯಾ ಶ್ರೀನಿವಾಸ್‌ ಗೌಡ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಳಿಗ್ಗೆಯಿಂದ ನಿರಂತರ ದೋಸೆ, ಕುಣಿತಾ ಭಜನೆ, ಹಣತೆ ಹಚ್ಚಿ ದೀಪಾವಳಿ ಆಚರಣೆ, ಗೋಪೂಜೆ ಉತ್ಸವ, ಸುಡುಮದ್ದು ಪ್ರದರ್ಶನ, ಭಜನೆ, ನಗರ ದೀಪಾಲಂಕಾರ, ಧಾರ್ಮಿಕ ಸಭಾ ಕಾರ್ಯಕ್ರಮ,ತೆಳಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್, ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ- 2024 ಸರಿಗಮಪ ಖ್ಯಾತಿಯ ಕ್ಷಿತಿ ಕೆ. ರೈ ಹಾಗೂ ಅನ್ವಿತ್ ಕೊಡಗು ಇವರಿಂದ ಗಾನ ವೈಭವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.

Related posts

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya
error: Content is protected !!