September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

ಅಳದಂಗಡಿ: ಸರ್ಕಾರಿ ಪ್ರೌಢಶಾಲೆ ಅಳದಂಗಡಿ ಶಾಲೆಯಲ್ಲಿ ಅ.30 ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆಯು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಸುರೇಂದ್ರ ಜೈನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಲಿಲ್ಲಿ ಮ್ಯಾಥ್ಯು ರವರು ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಎಲ್ಲಾ ಶಿಕ್ಷಕರೂ ವಿದ್ಯಾಭ್ಯಾಸ ಪ್ರಗತಿ ಬಗ್ಗೆ ಸಲಹೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ವಿಶ್ಲೇಷಣೆ ತರಗತಿ ಶಿಕ್ಷಕರಿಂದ ಮಾಡಲಾಯಿತು.


ವಿದ್ಯಾರ್ಥಿ ಹಾಗೂ ಪೋಷಕರಿಗೆ ಮನೋಸ್ಥೈರ್ಯ ಮತ್ತು ಮಾದಕ ದ್ರವ್ಯ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಶ್ರೀಮತಿ ಶಾಂತಿ ಮರಿಯಾ ಸಲ್ದಾನ ಕಾರ್ಯಕ್ರಮವನ್ನು ಉದ್ದೇಶಿಸಿ ಹಿತನುಡಿಯನ್ನಾಡಿದರು.

ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಸಮಾಜ ವಿಜ್ಞಾನ ಶಿಕ್ಷಕ ಚಂದ್ರಶೇಖರ್ ರಾವ್ ಕಾರ್ಯಕ್ರಮವನ್ನು ನಿರೂಪಿಸಿ, ಗಣಿತ ಶಿಕ್ಷಕರಾದ ಉಮೇಶ್ ಗೌಡ ವಂದಿಸಿದರು.

Related posts

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya
error: Content is protected !!