September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

ಅಳದಂಗಡಿ: ಸರ್ಕಾರಿ ಪ್ರೌಢಶಾಲೆ ಅಳದಂಗಡಿ ಶಾಲೆಯಲ್ಲಿ ಅ.30 ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆಯು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಸುರೇಂದ್ರ ಜೈನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಲಿಲ್ಲಿ ಮ್ಯಾಥ್ಯು ರವರು ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಎಲ್ಲಾ ಶಿಕ್ಷಕರೂ ವಿದ್ಯಾಭ್ಯಾಸ ಪ್ರಗತಿ ಬಗ್ಗೆ ಸಲಹೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ವಿಶ್ಲೇಷಣೆ ತರಗತಿ ಶಿಕ್ಷಕರಿಂದ ಮಾಡಲಾಯಿತು.


ವಿದ್ಯಾರ್ಥಿ ಹಾಗೂ ಪೋಷಕರಿಗೆ ಮನೋಸ್ಥೈರ್ಯ ಮತ್ತು ಮಾದಕ ದ್ರವ್ಯ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಶ್ರೀಮತಿ ಶಾಂತಿ ಮರಿಯಾ ಸಲ್ದಾನ ಕಾರ್ಯಕ್ರಮವನ್ನು ಉದ್ದೇಶಿಸಿ ಹಿತನುಡಿಯನ್ನಾಡಿದರು.

ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಸಮಾಜ ವಿಜ್ಞಾನ ಶಿಕ್ಷಕ ಚಂದ್ರಶೇಖರ್ ರಾವ್ ಕಾರ್ಯಕ್ರಮವನ್ನು ನಿರೂಪಿಸಿ, ಗಣಿತ ಶಿಕ್ಷಕರಾದ ಉಮೇಶ್ ಗೌಡ ವಂದಿಸಿದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!