23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿII ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾದ ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ನಂದಾ ಕೆ ರಾಷ್ಟ್ರಧ್ವಜವನ್ನು ಹಾರಿಸಿ, ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಮತ್ತು ಸಹ ಶಿಕ್ಷಕರು ಕೂಡ ಭಾಗಿಯಾದರು.

‘ಕರ್ನಾಟಕ ಏಕೀಕರಣದ’ ಕುರಿತು ಶಾಲಾ ವಿದ್ಯಾರ್ಥಿಯಾದ ಜನ್ವಿತ್ ಸವಿಸ್ತಾರವಾಗಿ ಹೇಳಿದನು. ಶಾಲಾ ಮಕ್ಕಳು ಕನ್ನಡ ನಾಡು- ನುಡಿ ಸಂಸ್ಕೃತಿಯನ್ನು ಕನ್ನಡದ ಕವಿಗಳು ರಚಿಸಿದ ಹಾಡುಗಳನ್ನು ಹಾಡುತ್ತಾ ಅಭಿವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ರಮ್ಯಾ, ಸದಸ್ಯ ಪುರುಷೋತ್ತಮ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ನಿನಾದ ಸ್ವಾಗತಿಸಿ, ಅಭಿಲಾಷ್ ವಂದಿಸಿ, ಯಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!