29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿII ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾದ ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ನಂದಾ ಕೆ ರಾಷ್ಟ್ರಧ್ವಜವನ್ನು ಹಾರಿಸಿ, ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಮತ್ತು ಸಹ ಶಿಕ್ಷಕರು ಕೂಡ ಭಾಗಿಯಾದರು.

‘ಕರ್ನಾಟಕ ಏಕೀಕರಣದ’ ಕುರಿತು ಶಾಲಾ ವಿದ್ಯಾರ್ಥಿಯಾದ ಜನ್ವಿತ್ ಸವಿಸ್ತಾರವಾಗಿ ಹೇಳಿದನು. ಶಾಲಾ ಮಕ್ಕಳು ಕನ್ನಡ ನಾಡು- ನುಡಿ ಸಂಸ್ಕೃತಿಯನ್ನು ಕನ್ನಡದ ಕವಿಗಳು ರಚಿಸಿದ ಹಾಡುಗಳನ್ನು ಹಾಡುತ್ತಾ ಅಭಿವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ರಮ್ಯಾ, ಸದಸ್ಯ ಪುರುಷೋತ್ತಮ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ನಿನಾದ ಸ್ವಾಗತಿಸಿ, ಅಭಿಲಾಷ್ ವಂದಿಸಿ, ಯಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!