September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

ಉಜಿರೆ: ಗುರು ಪರಂಪರೆ ನಮ್ಮ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ವವಾದ ಸ್ಥಾನವನ್ನು ಗಳಿಸಿಕೊಂಡಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್ ಕೃಷ್ಣ ಪಡ್ವೆಟ್ನಾಯ ಹೇಳಿದರು.

ಅವರು ನ.2ರಂದು ಉಜಿರೆ ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ಆಶ್ರಯದಲ್ಲಿ ನೂತನ ಒಳ ಕ್ರೀಡಾಂಗಣ ಇದರ ಪ್ರಾರಂಭೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಹಿರಿಯರು ಕೊಟ್ಟಂತಹ ಮೌಲ್ಯಗಳನ್ನು ನಮ್ಮ ಮಕ್ಕಳಿಗೆ ನೀಡಿ ಆಧುನಿಕ ಶಿಕ್ಷಣವನ್ನು ನೀಡಬೇಕು ಎಂಬ ಮನಸ್ಸಿನಿಂದ ಈ ದೇಶಿಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ ಎಂದು ಸಂಸ್ಥೆಗೆ ಶುಭಹಾರೈಸಿದರು.

ಶ್ರೀ ದೇಶಿಕೇಂದ್ರ ವಿದ್ಯಾಲಯ ಇದರ ವಿದ್ಯಾರ್ಥಿಗಳು ಭಗವತ್ ಗೀತಾ ಪಾರಾಯಣ, ಶ್ಲೋಕ, ಶುಭಾಷಿತಗಳನ್ನು ಹಾಡಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಉಜಿರೆ ಮಹಾವೀರ ಗ್ರೂಪ್ಸ್ ಇದರ ಮಾಲಕರಾದ ಪ್ರಭಾಕರ ಹೆಗ್ಡೆ, ಮುಖ್ಯ ಶಿಕ್ಷಕರು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಕಲ್ಲೇಶಪ್ಪ ಕೆ.ಬಿ., ಎ.ಎಂ. ಟವರ್ಸ್ ಕಟ್ಟಡದ ಮಾಲಕರಾದ ನಝೀರ್ ಎ.ಎಂ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ಸದಸ್ಯರು, ದೇಶಿಕೇಂದ್ರದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ಅಧ್ಯಕ್ಷರಾದ ನವೀನ್ ಪ್ರಕಾಶ್ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೇಶಿಕೇಂದ್ರದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಸಾದ್ ನಿರೂಪಿಸಿ, ಮೋನಪ್ಪ ಟಿ ಧನ್ಯವಾದವಿತ್ತರು.

Related posts

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!