27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!