26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!