September 6, 2026
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಧರ್ಮ ಸ್ಥಳ ಎಸ್‌ಡಿಎಂ ಆಂ.ಮಾ. ಶಾಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ

Suddi Udaya
error: Content is protected !!