30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಕೊಕ್ಕಡ: ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅ.30 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ತಿಳಿಸಿದರು.

ಸಾಂಪ್ರದಾಯಿಕ ರೀತಿಯಲ್ಲಿ ಗೋ ಪೂಜೆಯನ್ನು ನಡೆಸಿ ಸನಿವಾಸಿಗಳಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು.

ಸೇವಾಧಾಮದ ಫಲಾನುಭವಿ ಶೇಖರ್ ಬೈಪಾಡಿ ತಮ್ಮ ಮಗಳ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು. ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಸೇವಾಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ ನವೆಂಬರ್ 14ರಂದು ನೂತನ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸದ ಪ್ರತಿಯನ್ನು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಧನ್ಯವಾದವಿತ್ತರು.

Related posts

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya
error: Content is protected !!