22.6 C
ಪುತ್ತೂರು, ಬೆಳ್ತಂಗಡಿ
September 16, 2026
Uncategorized

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಕೊಕ್ಕಡ: ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅ.30 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ತಿಳಿಸಿದರು.

ಸಾಂಪ್ರದಾಯಿಕ ರೀತಿಯಲ್ಲಿ ಗೋ ಪೂಜೆಯನ್ನು ನಡೆಸಿ ಸನಿವಾಸಿಗಳಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು.

ಸೇವಾಧಾಮದ ಫಲಾನುಭವಿ ಶೇಖರ್ ಬೈಪಾಡಿ ತಮ್ಮ ಮಗಳ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು. ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಸೇವಾಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ ನವೆಂಬರ್ 14ರಂದು ನೂತನ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸದ ಪ್ರತಿಯನ್ನು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಧನ್ಯವಾದವಿತ್ತರು.

Related posts

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
error: Content is protected !!