Uncategorized

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

ಮಡಂತ್ಯಾರ್ : ಜೆಸಿಐ ಮಡಂತ್ಯಾರು ವಿಜಯ 2024ರ ಜೇಸಿ ಸಪ್ತಾಹವು ಅಕ್ಟೋಬರ್ 13ರಿಂದ 19ರವರೆಗೆ ಕೊರೆಯ ಕಂಪೌಂಡ್ ಮಡಂತ್ಯಾರು ಇಲ್ಲಿ ನಡೆಯಿತು.
ಉದ್ಘಾಟನಾ ಕಾರ್ಯಕ್ರಮವನ್ನು ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರದಾನ ಅರ್ಚಕರಾದ ಶ್ರೀ ಪೇಜಾವರ ಶ್ರೀಧರ ಭಟ್ ರವರ ದಿವ್ಯ ಹಸ್ತದಲ್ಲಿ ನೆರವೇರಿಸಲಾಯಿತು.. ನಂತರ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಸಪ್ತಾಹ ಆಯೋಜಿಸಲಾಯಿತು..

ಏಳು ದಿನಗಳ ಈ ಕಾರ್ಯಕ್ರಮದಲ್ಲಿ ಡಾ/ ಎಂ. ಮೋಹನ ಆಳ್ವ, JCI sen ಸಂಪತ್ ಬಿ ಸುವರ್ಣ, ಶ್ರೀ ಶಶಿಧರ್ ಶೆಟ್ಟಿ ಬರೋಡ , ಶ್ರೀ ಅಲೆಕ್ಸ್ ಐವನ್ ಸಿಕ್ವೇರಾ, ರೆ|ಸ್ವಾಮಿ| ಸ್ಟ್ಯಾನಿ ಗೋವಿಯಸ್, ಶ್ರೀ ಪೃಥ್ವಿ ಸಾನಿಕಂ ಮಾನ್ಯ ತಹಶೀಲ್ದಾರರು, ವಲಯದ್ಯಕ್ಷರಾದ JCI Sen Adv ಗಿರೀಶ್ ಎಸ್ ಪಿ, ಎಕ್ಸೆಲ್ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್, ಶ್ರೀ ಯೋಗೀಶ್ ಪೂಜಾರಿ ಕಡ್ತಿಲ, ಪೂರ್ವ ರಾಷ್ಟ್ರೀಯ ಕಾನೂನು ಸಲಹೆಗಾರರಾದ JCI PPP ಸೌಜನ್ಯ ಹೆಗ್ಡೆ, ಪಿಡಿಜಿ ಪ್ರಕಾಶ್ ಕಾರಂತ್, ಶ್ರೀ ಗಂಗಾಧರ್ ಇ ಮಂಡಗಲಲೆ, ಹೀಗೆ ಹಲವು ಗಣ್ಯರ ಉಪಸ್ಥಿಯಲ್ಲಿ ವಿಜೃಂಭಣೆಯಿಂದ ಜರುಗಿತು. ಏಳು ದಿನಗಳ ವಿಶೇಷ ಮನರಂಜನಾ ಕಾರ್ಯಕ್ರಮ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.. ವರ್ಷದ ಅತ್ಯುತ್ತಮ ಪ್ರಶಸ್ತಿ ಜೇಸಿ ಸಪ್ತಾಹ ವಿಜಯ 2024 ಪುರಸ್ಕಾರವನ್ನು ಬದುಕು ಕಟ್ಟೋಣ ಬನ್ನಿ ಇದರ ಸ್ಥಾಪಕರಾದ ಶ್ರೀ ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ಉಜಿರೆ ಇವರಿಗೆ ನೀಡಿ ಗೌರವಿಸಲಾಯಿತು ಹಾಗೆ ಪದ್ಮ ಶ್ರೀ ಪುರಸ್ಕೃತರಾದ ಶ್ರೀ ಹರೆಕ್ಕಳ ಹಾಜಬ್ಬ ರವರನ್ನು ಜೇಸಿ ವಿಜಯ 2024 ಪುರಸ್ಕಾರ ನೀಡಿ ಗೌರವಿಸಲಾಯಿತು.. ಹೀಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.. ಈ ಸಮಯದಲ್ಲಿ ಮಡಂತ್ಯಾರು ಘಟಕವನ್ನು ಕಟ್ಟಿ ಬೆಳೆಸಿದ 32 ಪೂರ್ವಾದ್ಯಕ್ಷರುಗಳ ಸಂಪೂರ್ಣ ಸಹಕಾರ 2023 ರ ಅಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಸಪ್ತಾಹ ಸಂಯೋಜಕ ಜೇಸಿ ಯತೀಶ್ ರೈ ಹಾಗೂ ಈ ವರ್ಷದ ಕಾರ್ಯದರ್ಶಿ ಜೇಸಿ ಸಂಯುಕ್ತ ಪೂಜಾರಿಯವರ ಸರ್ವ ರೀತಿಯ ಸಹಕಾರದೊಂದಿಗೆ ಸಪ್ತಾಹ ಯಶಸ್ವಿಯಾಗಿ ಸುಸಂಪನ್ನವಾಯಿತು..

Related posts

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya
error: Content is protected !!