April 7, 2025
ಧಾರ್ಮಿಕ

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ.21ರವರೆಗೆ ಮೊಕ್ಕಾಂ ಹೂಡಲಿದ್ದಾರೆ.ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ
10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ ತಲುಪುವ ಉದ್ದೇಶ ಹೊಂದಲಾಗಿದೆ.
ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Related posts

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya
error: Content is protected !!