September 6, 2026
Uncategorized

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ, ನ.1: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ, ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಸುಜನ್ ದಿನದ ಮಹತ್ವದ ಕುರಿತು ಮಾತನಾಡಿದರು.ವಿದ್ಯಾರ್ಥಿನಿ ತ್ರಿಷಾ ಜೈನ್ ಆಯ್ದ ಮಂಕುತಿಮ್ಮನ ಕಗ್ಗ ಮತ್ತು ತ್ರಿಪದಿಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಸುಮನ್ ಯು ಎಸ್ ಇವರು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತಾ ಸ್ವಾಗತಿಸಿ , ನಿಶ್ಮಿತಾ ವಂದಿಸಿದರು‌. ಇಂದುಮತಿ ನಿರೂಪಿಸಿದರು.

Related posts

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya
error: Content is protected !!