25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ, ನ.1: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ, ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಸುಜನ್ ದಿನದ ಮಹತ್ವದ ಕುರಿತು ಮಾತನಾಡಿದರು.ವಿದ್ಯಾರ್ಥಿನಿ ತ್ರಿಷಾ ಜೈನ್ ಆಯ್ದ ಮಂಕುತಿಮ್ಮನ ಕಗ್ಗ ಮತ್ತು ತ್ರಿಪದಿಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಸುಮನ್ ಯು ಎಸ್ ಇವರು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತಾ ಸ್ವಾಗತಿಸಿ , ನಿಶ್ಮಿತಾ ವಂದಿಸಿದರು‌. ಇಂದುಮತಿ ನಿರೂಪಿಸಿದರು.

Related posts

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya
error: Content is protected !!