April 18, 2025
Uncategorized

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಾರಾವಿ :ಕರ್ನಾಟಕವು ವಿವಿಧ ಭಾಷೆ, ಕಲೆ, ಸಂಸ್ಕೃತಿಗಳ ತವರೂರು ಹಾಗೂ ಇಲ್ಲಿ ಕನ್ನಡ ಭಾಷೆಗಿರುವ ಸ್ಥಾನ ಮಹತ್ವದ್ದು.
ಕನ್ನಡ ಭಾಷೆಯನ್ನು ಉಳಿಸುವುದು, ಕರ್ಣಾಟಕದಲ್ಲಿನ ಸಂಸ್ಕೃತಿಯನ್ನು ಬೆಳೆಸುವುದು ಮನುಷ್ಯನ ಮೊದಲ ಧ್ಯೇಯವಾಗಿರಬೇಕು” ಎಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ ಸ್ವಾಮಿ ಜೆರೋಮ್ ಡಿ’ಸೋಜಾ ಹೇಳಿದರು. ಅವರು ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತಾಡಿದರು. ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಮಾಡಿ ರಾಷ್ಟ್ರ ಗೀತೆ ಹಾಗೂ ಕರ್ನಾಟಕದ ವೈಭವವನ್ನು ಸಾರುವ ನಾಡಗೀತೆಯನ್ನು ಹಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು.
ಪದವಿ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕರಾದ ಶ್ರೀ ದಿನೇಶ್ ಬಿಕೆ ಇವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು ಎಲ್ಲಾ ಮುಕ್ಯೋಪಾಧ್ಯಾಯರು ಅಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪದವಿ ಕಾಲೇಜಿನ ವಿದ್ಯಾರ್ಥಿನಿ ಕು.ಅನ್ವಿತಾ ರಾವ್ ಮಾಡಿದರು.ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವುದರ ಮೂಲಕ
ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.

Related posts

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya
error: Content is protected !!