25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ನಡ :ವಿದ್ಯಾಸಂಸ್ಥೆ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಯಲ್ಲಿ ನ.01 ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಅಧ್ಯಕ್ಷರಾದ ಜನಾಬ್ ಸೈಯದ್ ಹಬೀಬ್ ಸಾಹೇಬ್ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀಯುತ ಸೈಯದ್ ಅಯ್ಯುಬ್ , ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಮಾಡಿ ಮಾತನಾಡಿದ ಶ್ರೀಯುತ ಜನಾಬ್ ಸೈಯ್ಯದ್ ಹಬೀಬ್ ಸಾಹೇಬ್ ಇವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಅತಿಥಿಯಾದ ಸೈಯದ್ ಅಯ್ಯುಬ್ ಇವರು ಮಾತನಾಡಿ” ಕರ್ನಾಟಕದಲ್ಲಿ ದೊರೆಯುವ ನೈಸರ್ಗಿಕ ಸಂಪನ್ಮೂಲಗಳ ಸದ್ಭಳಕೆ ಹಾಗೂ ಸಾಮರಸ್ಯ ಜೀವನಕ್ಕೆ ಕರ್ನಾಟಕದ ಕೊಡುಗೆ ಅಪಾರ “ಎಂದರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಮತಿ ಜಾಕಿನ್ ಬಿನ್ ಇವರು “ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ನಾಡಿನ ಸಂಸ್ಕೃತಿ ,ಪರಂಪರೆ ಹಾಗೂ ಆಚಾರ ವಿಚಾರಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು. ಶಾಲಾ ಸಹ ಶಿಕ್ಷಕಿ ರಾಬಿಯ ಇವರು ದ. ರಾ. ಬೇಂದ್ರೆಯವರ ಜೀವನಾಧಾರಿತ ಕಥೆಯನ್ನು ಹೇಳುವುದರ ಮೂಲಕ ಕನ್ನಡದ ಮಹತ್ವವನ್ನು ತಿಳಿಸಿಕೊಟ್ಟರು. ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಂದ ಕನ್ನಡ ನಾಡಿನ ಸಂಸ್ಕೃತಿಯನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!