28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!