23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!