September 6, 2026
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya
error: Content is protected !!