23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಕೊಕ್ಕಡ: ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅ.30 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ತಿಳಿಸಿದರು.

ಸಾಂಪ್ರದಾಯಿಕ ರೀತಿಯಲ್ಲಿ ಗೋ ಪೂಜೆಯನ್ನು ನಡೆಸಿ ಸನಿವಾಸಿಗಳಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು.

ಸೇವಾಧಾಮದ ಫಲಾನುಭವಿ ಶೇಖರ್ ಬೈಪಾಡಿ ತಮ್ಮ ಮಗಳ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು. ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಸೇವಾಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ ನವೆಂಬರ್ 14ರಂದು ನೂತನ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸದ ಪ್ರತಿಯನ್ನು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya
error: Content is protected !!