23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಕೊಕ್ಕಡ: ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅ.30 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ತಿಳಿಸಿದರು.

ಸಾಂಪ್ರದಾಯಿಕ ರೀತಿಯಲ್ಲಿ ಗೋ ಪೂಜೆಯನ್ನು ನಡೆಸಿ ಸನಿವಾಸಿಗಳಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು.

ಸೇವಾಧಾಮದ ಫಲಾನುಭವಿ ಶೇಖರ್ ಬೈಪಾಡಿ ತಮ್ಮ ಮಗಳ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು. ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಸೇವಾಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ ನವೆಂಬರ್ 14ರಂದು ನೂತನ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸದ ಪ್ರತಿಯನ್ನು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಧನ್ಯವಾದವಿತ್ತರು.

Related posts

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya
error: Content is protected !!