23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ.21ರವರೆಗೆ ಮೊಕ್ಕಾಂ ಹೂಡಲಿದ್ದಾರೆ.ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ
10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ ತಲುಪುವ ಉದ್ದೇಶ ಹೊಂದಲಾಗಿದೆ.
ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Related posts

ಯಕ್ಷಕೂಟ ೫ ನೇ ವಾರ್ಷಿಕೋತ್ಸವ- ಸಾಧಕರಿಗೆ ಸಮ್ಮಾನ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya
error: Content is protected !!