25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ, ನ.1: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ, ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಸುಜನ್ ದಿನದ ಮಹತ್ವದ ಕುರಿತು ಮಾತನಾಡಿದರು.ವಿದ್ಯಾರ್ಥಿನಿ ತ್ರಿಷಾ ಜೈನ್ ಆಯ್ದ ಮಂಕುತಿಮ್ಮನ ಕಗ್ಗ ಮತ್ತು ತ್ರಿಪದಿಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಸುಮನ್ ಯು ಎಸ್ ಇವರು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತಾ ಸ್ವಾಗತಿಸಿ , ನಿಶ್ಮಿತಾ ವಂದಿಸಿದರು‌. ಇಂದುಮತಿ ನಿರೂಪಿಸಿದರು.

Related posts

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya
error: Content is protected !!