September 6, 2026
Uncategorized

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ, ನ.1: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ, ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಸುಜನ್ ದಿನದ ಮಹತ್ವದ ಕುರಿತು ಮಾತನಾಡಿದರು.ವಿದ್ಯಾರ್ಥಿನಿ ತ್ರಿಷಾ ಜೈನ್ ಆಯ್ದ ಮಂಕುತಿಮ್ಮನ ಕಗ್ಗ ಮತ್ತು ತ್ರಿಪದಿಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಸುಮನ್ ಯು ಎಸ್ ಇವರು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತಾ ಸ್ವಾಗತಿಸಿ , ನಿಶ್ಮಿತಾ ವಂದಿಸಿದರು‌. ಇಂದುಮತಿ ನಿರೂಪಿಸಿದರು.

Related posts

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya
error: Content is protected !!