29.5 C
ಪುತ್ತೂರು, ಬೆಳ್ತಂಗಡಿ
April 5, 2025
Uncategorized

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಾರಾವಿ :ಕರ್ನಾಟಕವು ವಿವಿಧ ಭಾಷೆ, ಕಲೆ, ಸಂಸ್ಕೃತಿಗಳ ತವರೂರು ಹಾಗೂ ಇಲ್ಲಿ ಕನ್ನಡ ಭಾಷೆಗಿರುವ ಸ್ಥಾನ ಮಹತ್ವದ್ದು.
ಕನ್ನಡ ಭಾಷೆಯನ್ನು ಉಳಿಸುವುದು, ಕರ್ಣಾಟಕದಲ್ಲಿನ ಸಂಸ್ಕೃತಿಯನ್ನು ಬೆಳೆಸುವುದು ಮನುಷ್ಯನ ಮೊದಲ ಧ್ಯೇಯವಾಗಿರಬೇಕು” ಎಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ ಸ್ವಾಮಿ ಜೆರೋಮ್ ಡಿ’ಸೋಜಾ ಹೇಳಿದರು. ಅವರು ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತಾಡಿದರು. ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಮಾಡಿ ರಾಷ್ಟ್ರ ಗೀತೆ ಹಾಗೂ ಕರ್ನಾಟಕದ ವೈಭವವನ್ನು ಸಾರುವ ನಾಡಗೀತೆಯನ್ನು ಹಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು.
ಪದವಿ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕರಾದ ಶ್ರೀ ದಿನೇಶ್ ಬಿಕೆ ಇವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು ಎಲ್ಲಾ ಮುಕ್ಯೋಪಾಧ್ಯಾಯರು ಅಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪದವಿ ಕಾಲೇಜಿನ ವಿದ್ಯಾರ್ಥಿನಿ ಕು.ಅನ್ವಿತಾ ರಾವ್ ಮಾಡಿದರು.ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವುದರ ಮೂಲಕ
ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.

Related posts

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ