April 2, 2025
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!