22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya
error: Content is protected !!