23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!