23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಕೊಕ್ಕಡ: ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅ.30 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ತಿಳಿಸಿದರು.

ಸಾಂಪ್ರದಾಯಿಕ ರೀತಿಯಲ್ಲಿ ಗೋ ಪೂಜೆಯನ್ನು ನಡೆಸಿ ಸನಿವಾಸಿಗಳಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು.

ಸೇವಾಧಾಮದ ಫಲಾನುಭವಿ ಶೇಖರ್ ಬೈಪಾಡಿ ತಮ್ಮ ಮಗಳ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು. ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಸೇವಾಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ ನವೆಂಬರ್ 14ರಂದು ನೂತನ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸದ ಪ್ರತಿಯನ್ನು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಧನ್ಯವಾದವಿತ್ತರು.

Related posts

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!