24 C
ಪುತ್ತೂರು, ಬೆಳ್ತಂಗಡಿ
July 25, 2026
Uncategorized

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

ಕೊಕ್ಕಡ: ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅ.30 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ತಿಳಿಸಿದರು.

ಸಾಂಪ್ರದಾಯಿಕ ರೀತಿಯಲ್ಲಿ ಗೋ ಪೂಜೆಯನ್ನು ನಡೆಸಿ ಸನಿವಾಸಿಗಳಿಗೆ, ಫಲಾನುಭವಿಗಳಿಗೆ, ಆರೈಕೆದಾರರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಭಿನ್ನ ಚಟುವಟಿಕೆಗಳನ್ನು ಮಾಡಿ ಜೊತೆಗೆ ನೃತ್ಯ ಪ್ರದರ್ಶನವನ್ನು ನೀಡಿ ಎಲ್ಲರನ್ನು ಮನರಂಜಿಸಲಾಯಿತು.

ಸೇವಾಧಾಮದ ಫಲಾನುಭವಿ ಶೇಖರ್ ಬೈಪಾಡಿ ತಮ್ಮ ಮಗಳ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿಕೊಂಡರು. ಹಣತೆಯನ್ನು ಹಚ್ಚಿ ಪಟಾಕಿಯನ್ನು ಸಿಡಿಸಿ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಸೇವಾಭಾರತಿ ಕನ್ಯಾಡಿ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ ನವೆಂಬರ್ 14ರಂದು ನೂತನ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸದ ಪ್ರತಿಯನ್ನು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸಲಹಾ ಸಮಿತಿಯ ಸದಸ್ಯರು ಫಲಾನುಭವಿಗಳು, ಸನಿವಾಸಿಗಳು, ಆರೈಕೆದಾರರು, ಸ್ವಯಂಸೇವಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಧನ್ಯವಾದವಿತ್ತರು.

Related posts

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya
error: Content is protected !!