23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ.21ರವರೆಗೆ ಮೊಕ್ಕಾಂ ಹೂಡಲಿದ್ದಾರೆ.ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ
10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ ತಲುಪುವ ಉದ್ದೇಶ ಹೊಂದಲಾಗಿದೆ.
ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Related posts

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!