July 23, 2026
ಧಾರ್ಮಿಕ

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ.21ರವರೆಗೆ ಮೊಕ್ಕಾಂ ಹೂಡಲಿದ್ದಾರೆ.ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ
10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ ತಲುಪುವ ಉದ್ದೇಶ ಹೊಂದಲಾಗಿದೆ.
ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!