23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

ಮಂಗಳೂರು, ಅ.29;ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ.21ರವರೆಗೆ ಮೊಕ್ಕಾಂ ಹೂಡಲಿದ್ದಾರೆ.ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ
10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ ತಲುಪುವ ಉದ್ದೇಶ ಹೊಂದಲಾಗಿದೆ.
ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Related posts

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
error: Content is protected !!