32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ, ನ.1: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ, ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಸುಜನ್ ದಿನದ ಮಹತ್ವದ ಕುರಿತು ಮಾತನಾಡಿದರು.ವಿದ್ಯಾರ್ಥಿನಿ ತ್ರಿಷಾ ಜೈನ್ ಆಯ್ದ ಮಂಕುತಿಮ್ಮನ ಕಗ್ಗ ಮತ್ತು ತ್ರಿಪದಿಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಸುಮನ್ ಯು ಎಸ್ ಇವರು ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತಾ ಸ್ವಾಗತಿಸಿ , ನಿಶ್ಮಿತಾ ವಂದಿಸಿದರು‌. ಇಂದುಮತಿ ನಿರೂಪಿಸಿದರು.

Related posts

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya
error: Content is protected !!