September 6, 2026
Uncategorized

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಾರಾವಿ :ಕರ್ನಾಟಕವು ವಿವಿಧ ಭಾಷೆ, ಕಲೆ, ಸಂಸ್ಕೃತಿಗಳ ತವರೂರು ಹಾಗೂ ಇಲ್ಲಿ ಕನ್ನಡ ಭಾಷೆಗಿರುವ ಸ್ಥಾನ ಮಹತ್ವದ್ದು.
ಕನ್ನಡ ಭಾಷೆಯನ್ನು ಉಳಿಸುವುದು, ಕರ್ಣಾಟಕದಲ್ಲಿನ ಸಂಸ್ಕೃತಿಯನ್ನು ಬೆಳೆಸುವುದು ಮನುಷ್ಯನ ಮೊದಲ ಧ್ಯೇಯವಾಗಿರಬೇಕು” ಎಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ ಸ್ವಾಮಿ ಜೆರೋಮ್ ಡಿ’ಸೋಜಾ ಹೇಳಿದರು. ಅವರು ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತಾಡಿದರು. ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಮಾಡಿ ರಾಷ್ಟ್ರ ಗೀತೆ ಹಾಗೂ ಕರ್ನಾಟಕದ ವೈಭವವನ್ನು ಸಾರುವ ನಾಡಗೀತೆಯನ್ನು ಹಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು.
ಪದವಿ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕರಾದ ಶ್ರೀ ದಿನೇಶ್ ಬಿಕೆ ಇವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು ಎಲ್ಲಾ ಮುಕ್ಯೋಪಾಧ್ಯಾಯರು ಅಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪದವಿ ಕಾಲೇಜಿನ ವಿದ್ಯಾರ್ಥಿನಿ ಕು.ಅನ್ವಿತಾ ರಾವ್ ಮಾಡಿದರು.ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವುದರ ಮೂಲಕ
ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.

Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya
error: Content is protected !!