25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಾರಾವಿ :ಕರ್ನಾಟಕವು ವಿವಿಧ ಭಾಷೆ, ಕಲೆ, ಸಂಸ್ಕೃತಿಗಳ ತವರೂರು ಹಾಗೂ ಇಲ್ಲಿ ಕನ್ನಡ ಭಾಷೆಗಿರುವ ಸ್ಥಾನ ಮಹತ್ವದ್ದು.
ಕನ್ನಡ ಭಾಷೆಯನ್ನು ಉಳಿಸುವುದು, ಕರ್ಣಾಟಕದಲ್ಲಿನ ಸಂಸ್ಕೃತಿಯನ್ನು ಬೆಳೆಸುವುದು ಮನುಷ್ಯನ ಮೊದಲ ಧ್ಯೇಯವಾಗಿರಬೇಕು” ಎಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ ಸ್ವಾಮಿ ಜೆರೋಮ್ ಡಿ’ಸೋಜಾ ಹೇಳಿದರು. ಅವರು ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತಾಡಿದರು. ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಮಾಡಿ ರಾಷ್ಟ್ರ ಗೀತೆ ಹಾಗೂ ಕರ್ನಾಟಕದ ವೈಭವವನ್ನು ಸಾರುವ ನಾಡಗೀತೆಯನ್ನು ಹಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನುಆಚರಿಸಲಾಯಿತು.
ಪದವಿ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕರಾದ ಶ್ರೀ ದಿನೇಶ್ ಬಿಕೆ ಇವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು ಎಲ್ಲಾ ಮುಕ್ಯೋಪಾಧ್ಯಾಯರು ಅಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪದವಿ ಕಾಲೇಜಿನ ವಿದ್ಯಾರ್ಥಿನಿ ಕು.ಅನ್ವಿತಾ ರಾವ್ ಮಾಡಿದರು.ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವುದರ ಮೂಲಕ
ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya
error: Content is protected !!