22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ನಡ :ವಿದ್ಯಾಸಂಸ್ಥೆ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಯಲ್ಲಿ ನ.01 ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಅಧ್ಯಕ್ಷರಾದ ಜನಾಬ್ ಸೈಯದ್ ಹಬೀಬ್ ಸಾಹೇಬ್ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀಯುತ ಸೈಯದ್ ಅಯ್ಯುಬ್ , ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಮಾಡಿ ಮಾತನಾಡಿದ ಶ್ರೀಯುತ ಜನಾಬ್ ಸೈಯ್ಯದ್ ಹಬೀಬ್ ಸಾಹೇಬ್ ಇವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಅತಿಥಿಯಾದ ಸೈಯದ್ ಅಯ್ಯುಬ್ ಇವರು ಮಾತನಾಡಿ” ಕರ್ನಾಟಕದಲ್ಲಿ ದೊರೆಯುವ ನೈಸರ್ಗಿಕ ಸಂಪನ್ಮೂಲಗಳ ಸದ್ಭಳಕೆ ಹಾಗೂ ಸಾಮರಸ್ಯ ಜೀವನಕ್ಕೆ ಕರ್ನಾಟಕದ ಕೊಡುಗೆ ಅಪಾರ “ಎಂದರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಮತಿ ಜಾಕಿನ್ ಬಿನ್ ಇವರು “ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ನಾಡಿನ ಸಂಸ್ಕೃತಿ ,ಪರಂಪರೆ ಹಾಗೂ ಆಚಾರ ವಿಚಾರಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು. ಶಾಲಾ ಸಹ ಶಿಕ್ಷಕಿ ರಾಬಿಯ ಇವರು ದ. ರಾ. ಬೇಂದ್ರೆಯವರ ಜೀವನಾಧಾರಿತ ಕಥೆಯನ್ನು ಹೇಳುವುದರ ಮೂಲಕ ಕನ್ನಡದ ಮಹತ್ವವನ್ನು ತಿಳಿಸಿಕೊಟ್ಟರು. ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಂದ ಕನ್ನಡ ನಾಡಿನ ಸಂಸ್ಕೃತಿಯನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya
error: Content is protected !!