July 23, 2026
Uncategorized

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

ಬೆಳ್ತಂಗಡಿ :ಅ.
29 ದಂದು ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ 2024 ಎಂಬ ಅಂತರ್ ಶಾಲಾ ಸಾಂಸ್ಕ್ರತಿಕ ಸ್ಪರ್ಧೆಯನ್ನು ಕ ಉದ್ಘಾಟಿಸಿ ಮಾತನಾಡಿದ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟರಾಗಿರುವ ತೆಲಿಕೆದ ತೆನಾಲಿ ಖ್ಯಾತಿಯ ಶ್ರೀ ಸುನೀಲ್ ನೆಲ್ಲಿಗುಡ್ಡೆ ವಿದ್ಯಾರ್ಥಿಯಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಒಂದು ವೇದಿಕೆ ಎನ್ನುವುದು ಅಗತ್ಯ. ಅಂತಹ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರುವಲ್ಲಿ ಈ ಕಲಾ ಸಂಭ್ರಮ ಎಂಬ ವೇದಿಕೆಯು ಸಹಕಾರಿಯಾಗಲಿದೆ.ಒಬ್ಬ ವ್ಯಕ್ತಿಯಲ್ಲಿರುವ ಕಲೆ ಹಾಗೂ ಪ್ರತಿಭೆಯು ಮುಂದೊಂದು ದಿನ ಆತನನ್ನು ಕಲಾವಿದನನ್ನಾಗಿ ಮಾಡುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ ಸ್ವಾಮಿ ಜೆರೋಮ್ ಡಿ’ಸೋಜಾ ಸಾಧಿಸಲೇ ಬೇಕೆನ್ನುವ ಛಲವಿದ್ದ ಮನುಷ್ಯ ಸಿಕ್ಕ ಅವಕಾಶವನ್ನು ಎಂದಿಗೂ ಕಳೆದುಕೊಳ್ಳಲಾರ ಎಂಬುದನ್ನು ನಿದರ್ಶನದ ಮೂಲಕ ಹೇಳಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾoಶುಪಾಲ ವo. ಡಾ. ಆಲ್ವಿನ್ ಸೆರಾವೋ, ಮುಖ್ಯ ಅತಿಥಿಗಳಾದ ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸಂಜಯ್ ಮಿರಾಂದ ಹಾಗೂ ಶ್ರೀಮತಿ ಎವ್ಜಿನ್ ರೋಡ್ರಿಗಸ್, ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರುಗಳಾದ ಶ್ರೀ ಸಂತೋಷ್ ಸಲ್ಡಾನ ಹಾಗೂ ಶ್ರೀ ರಿಚರ್ಡ್ ಮೋರಸ್,  ಕಾರ್ಯಕ್ರಮದ ಮುಖ್ಯ ಆಯೋಜಕರಾಗಿರುವ ಹಾಗೂ ಸಾಂಸ್ಕ್ರತಿಕ ಸಂಘದ ನಿರ್ದೇಶಕರಾಗಿರುವ ಶ್ರೀ ಅವಿಲ್ ಮೋರಸ್, ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾಗಿರುವ ಶ್ರೀಮತಿ ಸೋನಿಯಾ ಡಿಸೋಜಾ, ಪದವಿ ಕಾಲೇಜಿನ ವಾಣಿಜ್ಯ ಸಂಘದ ನಿರ್ದೇಶಕರಾಗಿರುವ ಶ್ರೀ ಸಂತೋಷ್ ಹಾಗೂ ಶ್ರೀ ಅವಿನಾಶ್ ಲೋಬೋ, ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆರಾಗಿರುವ ಕು.ಶರಣ್ಯ ಹಾಗೂ ಕು.ಅಶ್ಮಿ ಉಪಸ್ಥಿತರಿದ್ದರು

ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿರುವ ಕು.ಶರಣ್ಯ ಎಲ್ಲರನ್ನು ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕು.ಅನ್ವಿತಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಕು. ಸನ್ವಿತಾ ಶೆಟ್ಟಿ ಇವರು ವಂದನಾರ್ಪಣೆ ಸಲ್ಲಿಸಿದರು.

Related posts

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya
error: Content is protected !!