September 6, 2026
Uncategorized

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಪತ್ನಿ ಭವ್ಯ ಜಿ.ಜಿ., ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಮಹಾಭಾರತದಲ್ಲಿ ಎಲೆಮರೆಯ ಕಾಯಿಯಂತಿರುವ ದಿವ್ಯಜ್ಞಾನಿ ಸಹದೇವನ ಕುರಿತ ಸಮಗ್ರ ಮಾಹಿತಿಯುಳ್ಳ ಈ ಕಾದಂಬರಿಗೆ ಹಿರಿಯ ಯಕ್ಷಗಾನ ತಾಳಮದ್ದಳೆ ವಿದ್ವಾಂಸ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯ ಅವರ ಮುನ್ನುಡಿ ಬರೆದಿದ್ದು, ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಶುಭ ನುಡಿಗಳನ್ನು  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!