22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಪತ್ನಿ ಭವ್ಯ ಜಿ.ಜಿ., ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಮಹಾಭಾರತದಲ್ಲಿ ಎಲೆಮರೆಯ ಕಾಯಿಯಂತಿರುವ ದಿವ್ಯಜ್ಞಾನಿ ಸಹದೇವನ ಕುರಿತ ಸಮಗ್ರ ಮಾಹಿತಿಯುಳ್ಳ ಈ ಕಾದಂಬರಿಗೆ ಹಿರಿಯ ಯಕ್ಷಗಾನ ತಾಳಮದ್ದಳೆ ವಿದ್ವಾಂಸ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯ ಅವರ ಮುನ್ನುಡಿ ಬರೆದಿದ್ದು, ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಶುಭ ನುಡಿಗಳನ್ನು  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನ 36 ವರ್ಷದ ಟ್ರಾವೆಲ್ ಹಿಸ್ಟರಿ ಮಾತ್ರ ಬಿಂದಾಸ್

Suddi Udaya
error: Content is protected !!