September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ ಮುಂಡತ್ತೊಡಿ ಶಾಲೆಯಲ್ಲಿ ನಡೆಸಲಾಯಿತು.

ಮುಂಡತ್ತೋಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸೇವಂತಿಯವರು ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾಹಿತಿಗಳು ದೊರೆಯುತ್ತಿದ್ದು ಮಲ್ಲಿಗೆ ಕೃಷಿ ಮಾಡೋ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕೇಂದ್ರದ ಸದಸ್ಯರಿಗೆ ಮಲ್ಲಿಗೆ ಗಿಡಗಳನ್ನು ಉಚಿತವಾಗಿ ನೀಡಿ ಮಾಹಿತಿಯನ್ನು ನೀಡಿ ಸ್ವಉದ್ಯೋಗ ಮಾಡಲು ಪ್ರೇರಣೆಯನ್ನು ನೀಡುತ್ತಿದ್ದು ಗಿಡ ನಾಟಿ ಮಾಡಿ ಬೆಳೆಸಿ ಉತ್ತಮ ಆದಾಯ ಗಳಿಸುವಂತೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾದ ಸಿದ್ದವನ ನರ್ಸರಿಯ ಯೋಜನಾಧಿಕಾರಿ ದಯಾನಂದ ಗಿಡದ ಆಯ್ಕೆ ಮಾಡುವ ಕ್ರಮ ಘೋಷಣೆಯ ಬಗ್ಗೆ ಸ್ಥಳದ ಅವಕಾಶ ಇದ್ದಲ್ಲಿ ನೆಲದಲ್ಲಿ ನಾಟಿ ಮಾಡುವ ಬಗ್ಗೆ ಸ್ಥಳಾವಕಾಶ ಇಲ್ಲದೇ ಇದ್ದಲ್ಲಿ ಗ್ರೋ ಬ್ಯಾಗ್ ನಲ್ಲಿ ಗಿಡವನ್ನು ನಾಟಿ ಮಾಡುವ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರೇಮಾ ಸ್ವಾಗತಿಸಿ ವಲಯ ಮೇಲ್ವಿಚಾರಕರಾದ ವನಿತಾ ಧನ್ಯವಾದವಿತ್ತರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾವಸಂತ್ ಕಾರ್ಯಕ್ರಮ ನಿರೂಪಿಸಿದರು.

Related posts

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!