23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭವು ಬೆಳ್ತಂಗಡಿ ತಾಲ್ಲೂಕು ಸಂಯುಕ್ತ ಜಮಾ ಅತ್ ಖಾಝಿ,ಸುಲ್ತಾನುಲ್ ಉಲಮಾ,ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಂತಪುರಂ 2025 ನೇ ಜನವರಿ 14 ರಿಂದ 18 ರವರೆಗೆ ದಿನಾಂಕ ಪ್ರಕಟಿಸಿದ್ದಾರೆ.
ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯು ನ.04 ರಂದು ಎ.ಪಿ.ಉಸ್ತಾದ್ ರನ್ನು ಮರ್ಕಝ್ ನಲ್ಲಿ ಬೇಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.


ಆಡಳಿತ ಸಮಿತಿಯವರು ಪರಪ್ಪು ದರ್ಗಾ ಝಿಯಾರತ್ ಮತ್ತು ಕೂರತ್ ತಂಙಳ್ ಮಕ್ಬರ ಸಂದರ್ಶಿಸಿ ಮರ್ಕಝ್ ಗೆ ಬೇಟಿ ನೀಡಿದರು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ,ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಪೆಳತ್ತಲಿಕೆ,ಇಕ್ಬಾಲ್ ಮರ್ಝೂಕಿ ಸಖಾಫಿ,ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಉಪಾದ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಟ್ಟೆಮಾರ್,ಜಿ.ಅಬ್ದುಲ್ ಖಾದರ್,ಜೊತೆ ಕಾರ್ಯದರ್ಶಿ ಹಾರಿಶ್.ಎನ್.ಎ,ಸದಸ್ಯರಾದ ಬಿ.ಎಮ್.ಆದಂ ಹಾಜಿ, ಉದ್ಯಮಿ ರನೀಝ್.ಎಸ್.ಎ. ಹಾಜರಿದ್ದರು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!