33.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!