ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!