September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ನ.3ರಂದು ಮಧ್ಯಾಹ್ನ ಕಂಡು ಬಂದಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಹಾಗೂ ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಅ.31 ರಂದು ದಂಪತಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ   ಪೊಲೀಸರ ಸಹಕಾರದಲ್ಲಿ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದವು.

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನ. 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya
error: Content is protected !!